ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಮ್ಮಿಶ್ರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ತಾರತಮ್ಯವಿಲ್ಲದೆ ಜಾರಿಯಾಗಿವೆ
ಮಹದೇವಪುರ. ಕ್ಷೇತ್ರದಲ್ಲಿ ಗ್ರಾಮೀಣ ಸೊಗಡಿನ ಹಳ್ಳಿಗಳಿವೆ; ಆಧುನಿಕತೆಯ ಪ್ರಭಾವದ ನಗರಪ್ರದೇಶಗಳಿವೆ; ಹಳ್ಳಿಯೋ ನಗರವೋ ಎಂದು ಗೊತ್ತಾಗದ ಅರೆಪಟ್ಟಣಗಳಿವೆ. ಇಲ್ಲಿ ಸ್ಥಳೀಯ ಉದ್ದಿಮೆಗಳೂ ಹರಡಿವೆ; ನೂರಾರು ವಿಶ್ವಖ್ಯಾತಿಯ ಕಂಪೆನಿಗಳೂ ಸ್ಥಾಪನೆಯಾಗಿವೆ. ತಳಮಟ್ಟದ ಕಾರ್ಮಿಕರಿಂದ ಹಿಡಿದು ಬಹುರಾಷ್ಟ್ರೀಯ ಸ್ತರದ ಉದ್ಯೋಗಿಗಳು ಕ್ಷೇತ್ರದೆಲ್ಲೆಡೆ ಇದ್ದಾರೆ. ಭಾಷೆ, ಪಂಥ, ಆಚರಣೆ, ಧಾರ್ಮಿಕ ವೈವಿಧ್ಯ – ಹೌದು. ಮಹದೇವಪುರವೂ ಭಾರತದಂತೆಯೇ ವೈವಿಧ್ಯಗಳ ಆಗರ. ಅನಿವಾಸಿ ಭಾರತೀಯರೂ ಇಲ್ಲೇ ಹೆಚ್ಚು ಎಂದಮೇಲೆ ಈ ಕ್ಷೇತ್ರದ ವ್ಯಾಪ್ತಿಯನ್ನು ಊಹಿಸಿಕೊಳ್ಳಿ! ಈಶ್ವರನ ಹೆಸರು ಹೊತ್ತ ಈ ಪ್ರದೇಶದಲ್ಲಿ ನಿಜಕ್ಕೂ ಕಾಯಕವೇ ಕೈಲಾಸ!
ಇಂಥ ವೈವಿಧ್ಯಮಯ ಕ್ಷೇತ್ರವು ನಾಲ್ಕು ವರ್ಷಗಳ ಹಿಂದೆ ಬಹುಮುಖೀ ಅನುಭವದ ನೆಲೆಯಲ್ಲಿ ಬೆಳೆದ ಅರವಿಂದ ಲಿಂಬಾವಳಿಯವರನ್ನು ಆಯ್ಕೆ ಮಾಡಿದ್ದು ಸಹಜವೇ ಆಗಿತ್ತು. ತನ್ನ ಆಯ್ಕೆಗೆ ನ್ಯಾಯ ಒದಗಿಸಲು ಅರವಿಂದ ಲಿಂಬಾವಳಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಇವೆಲ್ಲ ಕೆಲಸಗಳನ್ನೂ ಪಾರದರ್ಶಕ ವ್ಯವಸ್ಥೆಯ ಮೂಲಕ, ಗುಣಮಟ್ಟಕ್ಕೆ ರಾಜಿ ಇಲ್ಲದಂತೆ ಪೂರ್ಣಗೊಳಿಸಲಾಗಿದೆ ಎಂಬುದು ಅರವಿಂದ ಲಿಂಬಾವಳಿಯವರ ವಿನಮ್ರ ಹೇಳಿಕೆ.
ರಸ್ತೆಗಳ ಡಾಂಬರೀಕರಣ, ಕಾಂಕ್ರಿಟೀಕರಣ, ಸೇತುವೆ ನಿರ್ಮಾಣ, ಚರಂಡಿ – ಒಳಚರಂಡಿಗಳ ದುರಸ್ತಿ ಮತ್ತು ನಿರ್ಮಾಣ, ಪಾದಚಾರಿ ಮಾರ್ಗಗಳ ನಿರ್ಮಾಣ, ಬೀದಿ ದೀಪ, ಕೊಳವೆ ಬಾವಿಗಳು, ಕೆರೆ ಅಭಿವೃದ್ಧಿ, ಸಮುದಾಯ ಭವನಗಳು, ಶೌಚಾಲಯಗಳು, ಗ್ರಾಮಗಳ ರಸ್ತೆಗಳು, ಹೈ ಮಾಸ್ಟ್ಗಳು, ಸ್ತ್ರೀ ಶಕ್ತಿ ಸಮುದಾಯ ಭವನಗಳು, ಶಾಲಾ ಕೊಠಡಿಗಳು, – ಹೀಗೆ ಸರ್ವಾಂಗೀಣ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಸಮಾಜದ ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳಿಂದ ಹಿಡಿದು ಸರ್ವಸ್ಪರ್ಶಿಯಾಗಿ ನಡೆದ ಈ ಕಾಮಗಾರಿಗಳೇ ಅರವಿಂದ ಲಿಂಬಾವಳಿಯವರ ಶಾಸಕತ್ವದ ಹೊಣೆಗಾರಿಕೆಯ ಯಶಸ್ವೀ ನಿರ್ವಹಣೆಗೆ ನಿದರ್ಶನ. ಹೀಗೆ ಪೂರ್ಣಗೊಂಡ ಹಲವು ಕಾಮಗಾರಿಗಳು ಮತ್ತು ವಿವಿಧ ಹಂತಗಳಲ್ಲಿ ಮುಂದುವರಿದಿರುವ ಕಾಮಗಾರಿಗಳೇ ಅರವಿಂದ ಲಿಂಬಾವಳಿಯವರಿಗೆ ಖುಷಿ ತಂದ ಕೆಲಸ. ಕಾರ್ಯಕರ್ತರು ಮತ್ತು ಸಾರ್ವಜನಿಕರ ಪರಿವೀಕ್ಷಣೆ, ಅಧಿಕಾರಿಗಳ ಬೆಂಬಲದಿಂದ ಈ ಎಲ್ಲ ಕಾಮಗಾರಿಗಳೂ ಸಕಾಲದಲ್ಲೇ ಪೂರ್ಣಗೊಂಡ ಸಮಾಧಾನವೂ ಅರವಿಂದ ಲಿಂಬಾವಳಿಯವರಿಗೆ ಇದೆ.
ಮೊದಲು ಹಳ್ಳ-ದಿಣ್ಣೆಗಳಿಂದ ಕೂಡಿದ ಕಳಪೆ ರಸ್ತೆಗಳಿದ್ದ ಮಹದೇವಪುರದಲ್ಲಿ ಈಗ ಡಾಂಬರು ರಸ್ತೆಗಳದ್ದೇ ದರ್ಬಾರು. ನಿರ್ವಹಣೆ ಇಲ್ಲದೇ ಬರಡಾಗಿದ್ದ ಪ್ರದೇಶಗಳಲ್ಲಿ ಸಾರ್ವಜನಿಕ ಉದ್ಯಾನಗಳಿವೆ. ಹೂಳು ತುಂಬಿ ಹಾಳಾಗಿದ್ದ ಚರಂಡಿಗಳೀಗ ದುರಸ್ತಿಗೊಂಡಿವೆ. ಸಾರ್ವಜನಿಕ ನೈರ್ಮಲ್ಯ ಎದ್ದು ಕಾಣುತ್ತಿದೆ.
ಮಹದೇವಪುರದ ಸಾಮಾಜಿಕ ಸ್ವಾಸ್ಥ್ಯವೂ ಮಾದರಿ ಪ್ರಮಾಣದಲ್ಲಿ ಸುಧಾರಿಸಿದೆ. ಇಡೀ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಒಂದೂ ಜಾತಿ ವಿದ್ವೇಷದ ಪ್ರಕರಣ ದಾಖಲಾಗಿಲ್ಲ. ಅಪರಾಧ ಪ್ರಮಾಣವೂ ಕುಗ್ಗಿರುವುದಕ್ಕೆ ಅಂಕಿ – ಅಂಶಗಳೇ ನಿದರ್ಶನ. ಒಟ್ಟಾರೆ ಮಹದೇವಪುರವೀಗ ಹೊಸ ಸೃಷ್ಟಿಯ ಬೀಡು ಎನ್ನಬಹುದು.
ಇದು ಅರವಿಂದ ಲಿಂಬಾವಳಿಯವರು ಹಟ ಹಿಡಿದು ಜನಪರ ಕೆಲಸ ಮಾಡಿಸಿದ್ದಕ್ಕೆ ಒಂದು ಪುಟ್ಟ ನಿದರ್ಶನ. ಮಹದೇವಪುರದ ಎಲ್ಲ ವಾರ್ಡ್ಗಳಲ್ಲಿ ಇಂಥ ಅಸಂಖ್ಯ ಕಾಮಗಾರಿಗಳಿಗೆ ಜೀವ ತಂದು ಸಮರ್ಪಕವಾಗಿ ಪೂರ್ಣಗೊಳಿಸಲಾಗಿದೆ.
ಕ್ಷೇತ್ರದ ಅಭಿವೃದ್ಧಿಗೆ ಇಲ್ಲಿನ ಹಲವಾರು ಸಂಘ ಸಂಸ್ಥೆಗಳು ನೀಡಿದ ಸಹಕಾರವೂ ಮುಖ್ಯವಾಗಿತ್ತು. ಹಲವು ಸಾರ್ವಜನಿಕರು, ಅಧಿಕಾರಿಗಳು ಮತ್ತು ಕಾರ್ಯಕರ್ತರು ನೀಡಿದ ಸಹಕಾರ, ಭಾಗಿತ್ವ – ಎಲ್ಲವನ್ನೂ ಅರವಿಂದ ಲಿಂಬಾವಳಿ ಕೃತಜ್ಞತೆಯಿಂದ ಸ್ಮರಿಸುತ್ತಾರೆ. ಎಲ್ಲರ ಅಭಿಮಾನ, ಪ್ರೀತಿ ಮತ್ತು ಕ್ರಿಯಾಶೀಲ ಬೆಂಬಲ – ಇವೇ ತನ್ನ ಸಾಧನೆಯ ಹಿಂದಿನ ಗುಟ್ಟು ಎಂದು ಅರವಿಂದ ಲಿಂಬಾವಳಿ ಹೃತ್ಪೂರ್ವಕವಾಗಿ ತಿಳಿಸುತ್ತಾರೆ
In rural and urban blend, development work without discrimination has touched all corners of the constituency
Mahadevapura, is an assembly segment blended with villages, cosmopolitan extensions and peaceful outskirt towns. It is not only an industrial hub, but also houses several multi- national companies. Working class as well soft-skilled techies are spread across the constituency. It is diverse in terms of its language, religion and culture. Like India, Mahadevapura is in itself a place of diversities. One never believes, but truth is that, the most number of NRIs are located here. Constituency, which is named after Lord Shiva is vibrant, vivid and spectacular as Lord Shiva himself!
It was quite natural for such a diverse constituency to have elected a versatile, experienced personality like Arvind Limbavali four years ago. Arvind Limbavali has made honest efforts to provide justice to his position. All these progress has been achieved through a transparent; no compromise on quality system is what humble Arvind Limbavali had to say.
Asphalting and concreting of roads, Construction of bridges, pavements, repair and maintenance of drainage, pedestrian ways, Street lights, Bore wells, development of lakes, Community halls, toilets, state highways, High-mast lights, women empowerment training and community halls, school buildings – are the overall developmental activities undertaken. Such developmental works, which have been catered to all the sects of the society, are examples of Arvind Limbavali’s able and successful management of his responsibility as a legislator. Such successfully completed and ongoing projects have made Arvind Limbavali proud of his work. He is also happy that all these projects have been fruitfully accomplished on time with the strong support of party workers, Government officials and cooperation of the public.
Neat and beautiful tar roads now rule Mahadevapura, which were earlier filled with pot-holes, mud and dust. Areas with no lung space now have beautiful and spacious parks. Clogged drainage and sewer lines have now been de-silted. Public hygiene is quite evident now.
The social health of Mahadevapura constituency has also significantly improved. There is no history of communal conflicts over the last four years. Statistics prove that there have been low crime rates. Mahadevapura has now evolved into a land of new possibilities and opportunities.
This is just a small example how Limbavali’s mettle brought in a great change to the people of Mahadevapura. Developmental works have been undertaken and completed efficiently in all the eight wards of the constituency.
Many Non-governmental Organizations have also been instrumental in the growth of Mahadevapura. Arvind Limbavali expresses his gratitude to the public, officials and party workers for their support. Limbavali feels that the love, affection and encouragement of the people is the secret behind his success.
ಸಾಧನೆಗಳು ೨೦೦೮-೧೩ – Achievements 2008-13
- ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ – Education sector: A spectacular achievement - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು ಗಂಭೀರ ಸವಾಲುಗಳನ್ನು ಎದುರಿಸುತ್ತಿತ್ತು. ದೇಶದ ಮಾನವ ಸಂಪನ್ಮೂಲವನ್ನು ಸಮೃದ್ಧಗೊಳಿಸುವ ಈ ಕಾಯಕದಲ್ಲಿ ಅರವಿಂದ ಲಿಂಬಾವಳಿಯವರು ಗರಿಷ್ಠ ಪ್ರಮಾಣದ ರಚನಾತ್ಮಕ, ಗುಣಾತ್ಮಕ ಬದಲಾವಣೆಗಳನ್ನು ತಂದರು. ಅವರು ಉನ್ನತ ಶಿಕ್ಷಣ ಸಚಿವರಾಗಿದ್ದ ಕಾಲಾವಧಿಯಲ್ಲಿ ತಳೆದ ನಿರ್ಣಯಗಳು, ರೂಪಿಸಿದ ಕಾರ್ಯಕ್ರಮಗಳು, ಜಾರಿಗೆ ತಂದ ವಿನೂತನ ಉಪಕ್ರಮಗಳೇ ಅವರ ಯಶಸ್ಸಿಗೆ ನಿದರ್ಶನಗಳಾಗಿವೆ. ಕಾಲೇಜು… Continue Reading
- ಶಿಬಿರ,ಮೇಳ,ಉತ್ಸವಗಳ ಸರಮಾಲೆ – A continuous series of Fairs and Festivals - ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು ಸೆಳೆದಿದೆ.ಕ್ಷೇತ್ರದಲ್ಲಿ ಎರಡು ಉದ್ಯೋಗ ಮೇಳಗಳು ನಡೆದವು. ಇಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಮೊದಲ ಮೇಳದಲ್ಲಿ ೭೦೦ ಜನರಿಗೆ ಉದ್ಯೋಗ ದೊರಕಿದರೆ, ನ್ಯೂ ಹಾರಿಜಾನ್ ಕಾಲೇಜು ಕ್ಯಾಂಪಸ್ನಲ್ಲಿ ನಡೆದ ಎರಡನೇ ಮೇಳದಲ್ಲಿ ೮೧೦ ಜನರಿಗೆ ಕೆಲಸ ಸಿಕ್ಕಿತು.ಮೊದಲ ವರ್ಷ ಮಹದೇವಪುರದಲ್ಲಿ ಆಚರಿಸಿದ ಯುಗಾದಿ ಉತ್ಸವವು ಮರುವರ್ಷದಿಂದ `ಮಹದೇವಪುರ ಉತ್ಸವ’ವಾಗಿ… Continue Reading
- ಧಾರ್ಮಿಕತೆ, ಸಾಮರಸ್ಯದ ತಂಗಾಳಿ – A gentle breeze of religious harmony - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ – ಹೀಗೆ ನಾಡಿನ ಮಹಾಪುರುಷರ ಜಯಂತಿಗಳ ಆಚರಣೆಯ ಹೊಸ ಪರಂಪರೆಯಿಂದಾಗಿ ಮಹದೇವಪುರ ಕ್ಷೇತ್ರದಲ್ಲಿ ಸಮನ್ವಯದ ಗಾಳಿ ಬೀಸಿದೆ. ಸಾಮರಸ್ಯದ ಸಂದೇಶ ಬೀರುವ ಈ ಕಾರ್ಯಕ್ರಮಗಳಲ್ಲಿ ಜನರು ಪಕ್ಷಬೇಧ ಮರೆತು ಸಾವಿರಾರು ಸಂಖ್ಯೆಯಲ್ಲಿ ಸ್ವಯಂಸ್ಫೂರ್ತಿಯಿಂದ ಭಾಗವಹಿಸಿದ್ದಾರೆ. ಬಹುಶಃ ಕ್ಷೇತ್ರವು ಶಾಂತ, ಸೌಹಾರ್ದ ವಾತಾವರಣದಿಂದಲೇ ಕೂಡಿರುವುದಕ್ಕೆ ಇಂಥ ಸಾಮಾಜಿಕ ಸಾಮರಸ್ಯದ ಆಚರಣೆಗಳೇ… Continue Reading
- ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ!- They waited for 30 years Now share the happiness! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇಡೀ ಕ್ಷೇತ್ರದಲ್ಲಿ ದಲಿತರು, ಸವರ್ಣೀಯರು, ಹಿಂದುಳಿದ ಸಮಾಜದ ಜನತೆ – ಎಲ್ಲರೂ ಅನ್ಯೋನ್ಯವಾಗಿ ಬಾಳ್ವೆ ನಡೆಸಿದ್ದಾರೆ. ಇದು ರಾಜ್ಯದಲ್ಲೇ ಒಂದು ವಿಶಿಷ್ಟ ಬೆಳವಣಿಗೆ. ಶಾಂತಿ ಸೌಹಾರ್ದದ ವಾತಾವರಣದ ಸ್ಥಿತಿಯೇ ಮಹದೇವಪುರದ ವೈಶಿಷ್ಟ್ಯ. ರಸ್ತೆ ಕ್ರಾಂತಿ ರಸ್ತೆಗಳ ವಿಷಯವನ್ನು ಮರೆಯಲು ಸಾಧ್ಯವೆ? ಅತಿ ಪ್ರಮುಖ ಲಿಂಕ್ ರಸ್ತೆಗಳ ಅಭಿವೃದ್ಧಿಯಿಂದ ಜನತೆಯ… Continue Reading
- ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು – Firm steps in Social development. - ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ ವಿವಿಧ ಬಗೆಯ ತರಬೇತಿಗಳು, ಅಂಬೇಡ್ಕರ್ ಭವನಗಳು, ಶಿಕ್ಷಣ ನೀಡಲು ವಿವಿಧ ಶಾಲಾ-ಕಾಲೇಜುಗಳು, ನೀರು ಸಂಗ್ರಹಕ್ಕೆ ಟ್ಯಾಂಕ್ಗಳು, ವಿಧವಾ-ವೃದ್ಧಾಪ್ಯ ವೇತನಗಳು, ಶಾಸಕರ ಅನುದಾನದಿಂದ ವಿವಿಧ ಕಾಮಗಾರಿಗಳು – ಒಂದೆ, ಎರಡೆ? ಅರವಿಂದ ಲಿಂಬಾವಳಿಯವರು ಕ್ಷೇತ್ರದ ಸಾಮಾಜಿಕ ಅಭಿವೃದ್ಧಿಗಾಗಿ ಹಲವು ಆಯಾಮಗಳಲ್ಲಿ ಕೆಲಸ ಮಾಡಿದ್ದಾರೆ. ನಿಜವಾದ ಸರ್ವಸ್ಪರ್ಶಿ ಅಭ್ಯುದಯ ಚಿಂತನೆ ಎಂದರೆ… Continue Reading
- ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ – Apartment residents’ problems solved - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್ಮೆಂಟ್ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರಕಿದೆ. ಅಲ್ಲದೆ ಹಲವೆಡೆ ಬೀದಿ ನಾಯಿಗಳ ಹಾವಳಿಯನ್ನೂ ತಪ್ಪಿಸಲಾಗಿದೆ. ಮುಖ್ಯವಾಗಿ ಅಪಾರ್ಟ್ಮೆಂಟ್ಗಳ ಸುತ್ತಮುತ್ತ ಬೇಕಾಗಿದ್ದ ಬೀದಿ ದೀಪಗಳನ್ನು ಸ್ಥಾಪಿಸಲಾಗಿದೆ. ಇದರಿಂದ ನಿವಾಸಿಗಳು ಯಾವ ಭಯವೂ ಇಲ್ಲದೆ ರಾತ್ರಿಯ ಹೊತ್ತು ಸಂಚರಿಸಬಹುದು. ಇದಲ್ಲದೆ ಹಲವು ನಿವಾಸಿಗಳಿಗೆ ಮನೆ ಖರೀದಿ ಮಾಡಿದ್ದರೂ ದೊರಕದೇ ಹೋಗಿದ್ದ ಖಾತಾಪತ್ರಗಳನ್ನು ಅರವಿಂದ… Continue Reading
- ಇಪಿಐಪಿ ಅಭಿವೃದ್ಧಿಯ ಯಶೋಗಾಥೆ – EPIP : A saga of Development - ವೈಟ್ಫೀಲ್ಡ್ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫ ಕಿಮೀ ಉದ್ದದ ಆಂತರಿಕ ಹೆದ್ದಾರಿಯನ್ನು ಅಸ್ಫಾಲ್ಟ್ ಮಾಡುವ ಕೆಲಸಕ್ಕೆ ೧೬.೪೦ ಕೋಟಿ ರೂ.ಗಳ ಬಿಡುಗಡೆಯಾಗಿದ್ದು ಕಾಮಗಾರಿಯು ಪ್ರಗತಿಯಲ್ಲಿದೆ. ಹಾಗೆಯೇ ಇಲ್ಲಿ ೪.೫೦ ಕಿಮೀ ಉದ್ದದ ೨ ಸಾಲಿನ (೨ ಲೇನ್) ಆಂತರಿಕ ಹೆದ್ದಾರಿಯ ಕಾಮಗಾರಿಯೂ ಪ್ರಗತಿಯಲ್ಲಿದೆ. ಇಪಿಐಪಿ ವಲಯದ ಬಳಿ ಇರುವ ಗ್ರಾಫೈಟ್ ಇಂಡಿಯಾ ಜಂಕ್ಷನ್ನಲ್ಲಿ ದ್ವಿಮುಖ ಸಂಚಾರದ… Continue Reading
- ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ – Improvement in Transport system - ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು ಒದಗಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಕಡಿಮೆ ಖರ್ಚಿನಲ್ಲಿ, ಕಡಿಮೆ ಸಮಯದಲ್ಲಿ ಬೆಂಗಳೂರು ನಗರಕ್ಕೆ ಬಂದು ಹೋಗಬಹುದು. ಇಪಿಐಪಿ ಪ್ರದೇಶದಲ್ಲಿ ೩೬ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಟಿಟಿಎಂಸಿ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಕೊಡತಿ ಮತ್ತು ಗುಂಜೂರಿನಲ್ಲಿ ಹೊಸದಾಗಿ ಬಸ್ ಡಿಪೋಗಳನ್ನು ನಿರ್ಮಿಸಲಾಗಿದೆ. ಈ ಡಿಪೋಗಳು ಸದ್ಯದಲ್ಲೇ ಕಾರ್ಯಾಚರಿಸಲಿವೆ. ಗ್ರಾಮೀಣ ಭಾಗಕ್ಕೂ… Continue Reading
- ಆರೋಗ್ಯಕ್ಕೆ ಆದ್ಯತೆ – Priority to Health - ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು ನಡೆದಿವೆ. ವರ್ತೂರಿನಲ್ಲಿ ನಡೆದ ಮೊದಲ ಮೆಗಾ ಹೆಲ್ತ್ ಕ್ಯಾಂಪಿನಲ್ಲಿ ೧೩೭೦೦ ರೋಗಿಗಳನ್ನು ಉಚಿತ ಬಸ್ ವ್ಯವಸ್ಥೆಯ ಮೂಲಕ ಕರೆತಂದು ಎರಡು ದಿನ ಊಟದ ವ್ಯವಸ್ಥೆಯನ್ನೂ ಮಾಡಿ, ಹತ್ತು ದಿನಗಳಿಗಾಗುವಷ್ಟು ಔಷಧಗಳನ್ನೂ ಉಚಿತವಾಗಿ ನೀಡಿದ ಅಗ್ಗಳಿಕೆ ಅರವಿಂದ ಲಿಂಬಾವಳಿಯವರ ಸಂಘಟನಾ ಸಾಮರ್ಥ್ಯಕ್ಕೆ ದೊರಕುವ ನಿದರ್ಶನ. ಇತ್ತೀಚೆಗಷ್ಟೆ ಕಾಡುಗೋಡಿಯಲ್ಲಿ ಎರಡನೇ ಬೃಹತ್… Continue Reading
- ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ – Revolution in the field of Education: A novel experiment - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು ಮತ್ತು ಕಾಡುಗೋಡಿ – ಒಟ್ಟು ಎರಡು ಪದವಿ ಕಾಲೇಜುಗಳು ಕ್ಷೇತ್ರಕ್ಕೆ ಬಂದಿವೆ. ಬೆಂಗಳೂರಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಎಂದರೆ ಎಸ್ ಜೆ ಪಾಲಿಟೆಕ್ನಿಕ್ ಮಾತ್ರ ಎಂದೇ ಮಾತಿರುವಾಗ ಕಾಡುಗೋಡಿ ವಾರ್ಡಿನ ಚನ್ನಸಂದ್ರ, ಹಗದೂರು ವಾರ್ಡಿನ ಇಮ್ಮಡಿಹಳ್ಳಿಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕೂಡಾ ಸ್ಥಾಪನೆಯಾಗಿವೆ. ಎಲ್ಲದಕ್ಕೂ ನಿವೇಶನಗಳೂ ಇವೆ; ಕಟ್ಟಡಗಳ ನಿರ್ಮಾಣ ಆರಂಭವಾಗಬೇಕಿದೆ.… Continue Reading